Header Ads

ಶಾಲೆಗಳ ಪುನರಾರಂಭ ರಾಜ್ಯ ಸರ್ಕಾರದ ಮಹತ್ವದ ಆದೇಶ


 ಶಾಲೆಗಳ ಪುನರಾರಂಭ ರಾಜ್ಯ ಸರ್ಕಾರದ ಮಹತ್ವದ ಆದೇಶ


             ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು ಮಹತ್ವದ ಆದೇಶ ಹೊರಡಿಸಲು ಸಿದ್ದತೆ ನಡೆಸಿರುತ್ತದೆ. ರಾಜ್ಯದಲ್ಲಿ ಕರೋನಾ ವೈರಸ್‌ ಸೋಂಕಿನ ಪ್ರಭಾವದಿಂದಾಗಿ ಕಳೆದ ಮಾರ್ಚ್‌ ನಿಂದ ಶಾಲೆ ಕಾಲೆಜುಗಳಿಗೆ ರಜೆ ಘೊಸಿಸಲಾಗಿತ್ತು. ಶಿಕ್ಷಣ ಇಲಾಖೆ ಶೈಕ್ಷಣಿಕ ವರ್ಷದ ಆರಂಭದಿಂದ ಹಿಡಿದು ಶಾಲೆ ಆರಂಭಿಸುವ ಕುರಿತು ಅನೇಕ ಚಿಂತನೆಗಳನ್ನು ನಡೆಸಿತ್ತು. ನಾನಾ ಮಾರ್ಗಗಳ ಮೂಲಕ ವಿದ್ಯಾರ್ಥಿಗಳಿಗೆ ಬೋಧನಾ ಕಾರ್ಯ ಕೈಗೋಳಲು ಸರ್ಕಾರಿ ಶಾಲೆಗಳಿಗೆ ಸೂಚನೆಯು ಸಹ ನೀಡಿತ್ತು.

ಈ ನಡುವಲ್ಲೆ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ಕುರಿತು ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಸೆಪ್ಟೆಂಬರ್‌ 30 ರ ಒಳಗಾಗಿ ಮಕ್ಕಳನ್ನು ಶಾಲೆಗೆ ಸೇರಿಸಿ ಶುಲ್ಕ ಪಾವತಿಸುವಂತೆ ಆದೇಶಿಸಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವ ಪ್ರಕ್ರಿಯೆ ಮುಕ್ತಾಯವಾಗಿದೆ.


ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ಮಕ್ಕಳ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರವೇಶ ಪ್ರಕ್ರಿಯೆ, ಶಾಲಾ ಶುಲ್ಕ ಪಾವತಿಸುವ ಕುರಿತು ಆದೇಶ ಹೊರಡಿಸಿದ್ದು, ಪೋಷಕರು ಪ್ರಥಮ ಕಂತಿನ ಶುಲ್ಕ ಪಾವತಿಸಿ ಮಕ್ಕಳನ್ನು ಶಾಲೆಗೆ ಸೇರಿಸಲು ಅವಕಾಶ ಕಲ್ಪಿಸಿದೆ. 2020 -21 ಸಾಲಿನ ಪ್ರವೇಶ ಪ್ರಕ್ರಿಯೆಯಲ್ಲಿ ಶಾಲಾ ಆಡಳಿತ ಮಂಡಳಿಯವರು ಪೋಷಕರಿಂದ ಹೆಚ್ಚಿನ ಶುಲ್ಕವನ್ನು ಪಡೆಯದೆ, ಶುಲ್ಕವನ್ನು ಕಂತುಗಳಲ್ಲಿ ಪಡೆಯಲು ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಿದೆ.

ಕಳೆದ 5 ತಿಂಗಳಿದ ಮಕ್ಕಳು ಮನೆಯಲ್ಲೆ ಇದ್ದಿರುವ ಕಾರಣ ಶೈಕ್ಷಣಿಕ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಈ ಪರಿಸ್ಥಿತಿ ಹೀಗೆ ಮುಂದುವರೆದರೆ ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ಕಳೆದುಕಳ್ಳುವ ಸಂಭವವಿರುತ್ತದೆ. ಅಲ್ಲದೆ ಶಾಲೆ ಆರಂಭವಾದ ಮೇಲೆಯು ಮಲ್ಲಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಹಾಗೆ ವಿದ್ಯಾರ್ಥಿಗಳು ಬಾಲಾಕಾರ್ಮಿಕ ಪದ್ದತಿ ಮತ್ತು ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳಿಗೆ ಬಲಿಯಾಗುವ ಅಪಾಯವಿರುತ್ತದೆ.

ಆದರಿಂದ 2020-21 ನೇ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ದಿನಾಂಕ 30-09-2020 ರೋಳಗೆ ಪೂರ್ಣಗೊಳಿಸಲು ಎಲ್ಲಾ ಶಾಲೆಗಳಿಗೆ  ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆಯ ಆದೇಶದಲ್ಲಿ ಸೂಚಿಸಲಾಗಿದೆ.

No comments

Powered by Blogger.