Header Ads

School Reopening: ಶಾಲೆಗಳ ಪುನಾರಂಭಕ್ಕೆ ಸಿದ್ಧತೆ; ಸರಣಿ ಸಭೆ ನಡೆಸಲು ಮುಂದಾದ ಶಿಕ್ಷಣ ಇಲಾಖೆ

 School Reopening: ಶಾಲೆಗಳ ಪುನಾರಂಭಕ್ಕೆ ಸಿದ್ಧತೆ; ಸರಣಿ ಸಭೆ ನಡೆಸಲು ಮುಂದಾದ ಶಿಕ್ಷಣ ಇಲಾಖೆ


ಶಿಕ್ಷಣ ಇಲಾಖೆ ಈ ಕುರಿತು ಅಧಿಕಾರಿಗಳೊಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಸಭೆ ನಡೆಸಲಿದೆ. ಕಳೆದ 18ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದೆ. ಈ ಹಿನ್ನಲೆ ಶಾಲೆ ಪುನರ್​ ಆರಂಭ ಕುರಿತು ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ.

ಬೆಂಗಳೂರು (ನ.3): ಕೊರೋನಾ ಸಂಕಷ್ಟದ ಸಮಯದಲ್ಲಿ ಶಾಲಾ-ಕಾಲೇಜುಗಳ ಪುನರ್​ಆರಂಭದ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಆದರೆ, ಶಿಕ್ಷಣ ಇಲಾಖೆ ಮಾತ್ರ ಶಾಲೆ ತೆರೆಯುವ ಕುರಿತು ಚಿಂತನೆ ನಡೆಸುತ್ತಲೇ ಇದೆ. ಈಗ  ನೆರೆಯ ರಾಜ್ಯಗಳಲ್ಲಿ  ಶಾಲಾ-ಕಾಲೇಜು ಪುನರ್​ ಆರಂಭವಾಗಿರುವುದು ಇದಕ್ಕೆ ಇನ್ನಷ್ಟು ಪುಷ್ಟಿ ಸಿಕ್ಕಿದೆ. ಈ ಹಿನ್ನಲೆ ರಾಜ್ಯದಲ್ಲಿ ಕೂಡ ಶಾಲೆ ತೆರೆಯುವ ಕುರಿತು ಚಿಂತನೆ ನಡೆಸಲಾಗಿದೆ. ಈ ಕುರಿತು ಸರಣಿ ಸಭೆ ನಡೆಸಲು ಶಿಕ್ಷಣ ಸಚಿವ ಸುರೇಶ್​ ಕುಮಾರ್​ಮುಂದಾಗಿದ್ದಾರೆ. ಕಳೆದ ಅಕ್ಟೋಬರ್​ನಲ್ಲಿ ಶಾಲೆ ಪುನರ್​ ಆರಂಭ ಕುರಿತು ದಿನಾಂಕ ನಿಗದಿಗೊಳಿಸಲಾಗಿತ್ತು. ಸೋಂಕು ಹೆಚ್ಚಳ ಪ್ರಕರಣ ಜೊತೆ ವಿರೋಧ ವ್ಯಕ್ತವಾದ ಹಿನ್ನಲೆ ಈ ನಿರ್ಧಾರವನ್ನು ಕೈ ಬಿಡಲಾಗಿತ್ತು. ಈಗ ಮತ್ತೆ ಶಾಲೆ ತೆರೆಯುವ ಚಿಂತನೆ ನಡೆದಿದ್ದು ಈ ಸಂಬಂಧ ಇಲಾಖೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ನಾಳೆ ಸಚಿವರು ಸಭೆ ನಡೆಸಲು ಮುಂದಾಗಿದ್ದಾರೆ. ನೆರೆಯ ಆಂಧ್ರದಲ್ಲಿ ಸೋಮವಾರದಿಂದ 9ನೇ ತರಗತಿಯಿಂದ 12ನೇ ತರಗತಿವರೆಗಿನ ಶಾಲೆಗಳ ಪುನರ್​ ಆರಂಭ ನಡೆಸಲಾಗಿದೆ. ಇದರಿಂದ ರಾಜ್ಯಲ್ಲಿ ಕೂಡ ಶಾಲೆ ತೆರೆಯಲೇಬೇಕು ಎಂಬ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ.

ಈ ಹಿಂದೆ ಆದ ರೀತಿ ದಿನಾಂಕ ಪ್ರಕಟಿಸಿ ಮತ್ತೆ ಹಿಂದೆ ಸರಿಯುವುದು ಬೇಡ ಎಂದು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಈ ಕುರಿತು ಅಧಿಕಾರಿಗಳೊಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಸಭೆ ನಡೆಸಲಿದೆ. ಕಳೆದ 18ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದೆ. ಈ ಹಿನ್ನಲೆ ಶಾಲೆ ಪುನರ್​ ಆರಂಭ ಕುರಿತು ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ.

 


ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಆಂಧ್ರಪ್ರದೇಶದ ಮಾದರಿಯನ್ನು ಗಂಭೀರವಾಗಿ ಅಧ್ಯಯನ ನಡೆಸುತ್ತಿದ್ದೇವೆ. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ವಿದ್ಯಾರ್ಥಿಗಳ ಜೀವನದ ಪ್ರಶ್ನೆ ಇದಾಗಿದೆ. ಈ ಹಿನ್ನಲೆ ಎಲ್ಲಾ ದೃಷ್ಟಿಕೋನದಲ್ಲಿಯೂ ಪರೀಕ್ಷಿಸಲಾಗುವುದು. ರಾಜ್ಯದಲ್ಲಿ ಸೋಂಕಿನ ಪ್ರಮಾಣ ತಗ್ಗಿದ್ದು, ನ.17ರಿಂದ ಕಾಲೇಜು ಪುನರ್​ ಆರಂಭಿಸಲು ಸರ್ಕಾರ ಸಮ್ಮತಿಸಿದೆ ಎಂದರು.

ಶಾಲೆಗಳನ್ನು ಹಂತ ಹಂತವಾಗಿ ತೆರೆಯುವುದು ಉತ್ತಮ ಎಂಬ ಅಭಿಪ್ರಾಯ ತಜ್ಞರಿಂದ ಬಂದಿದೆ. ಆನ್​ಲೈನ್​ನಿಂದಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಶಿಕ್ಷಣ ಪಡೆಯುವುದು ಸಾಧ್ಯವಿಲ್ಲ. ಈ ಹಿನ್ನಲೆ ಇದಕ್ಕೂ ಮುನ್ನ ನಾವು ಮಾಹಿತಿ ಸಂಗ್ರಹಿಸಿ ವಿದ್ಯಾರ್ಥಿ, ಶಿಕ್ಷಕರ ಆರೋಗ್ಯವನ್ನು ಗಮನದಲ್ಲಿರಿಸಿ ಈ ಸಭೆ ನಡೆಸಲಾಗುವುದು ಎಂದರು.

ದೀರ್ಘಕಾಲದವರೆಗೆ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಮನಸ್ಸುನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ತಜ್ಞರು ಭಾವಿಸುತ್ತಾರೆ. ಆದ್ದರಿಂದ ಅಂತಿಮ ತೀರ್ಮಾನಕ್ಕೆ ಬರುವ ಮೊದಲು ಎಲ್ಲಾ ವಿಷಯಗಳ ಕುರಿತು ಪರಿಶೀಲಿಸುತ್ತಿದ್ದೇವೆ.

ಈ ಹಿಂದೆ ಅ.11 ರಂದು ಶಾಲೆ ತೆರೆಯುವ ಕುರಿತು ಚರ್ಚೆಗಳು ನಡೆದಿದ್ದವು. ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತು ಚಿಂತನೆ ನಡೆಸಲಾಗಿತ್ತು ಈ ಸಂದರ್ಭದಲ್ಲಿ ಕೋವಿಡ್​ ಪ್ರಕರಣ ಹೆಚ್ಚಾದ ಹಿನ್ನಲೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು, ವಿದ್ಯಾರ್ಥಿ ಮತ್ತು ಮೂರು ವಾರಗಳ ರಜೆ ಘೋಷಿಸಿದರು.

News source : News18kannada

No comments

Powered by Blogger.